ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಲಾಯರ್‌ ಜಗದೀಶ್..! ಮಾಜಿ ಸಿಎಮ್ ಹೆಸರು ಹೇಳಿದ ಲಾಯರ್ ಜಗದೀಶ್

ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಲಾಯರ್‌ ಜಗದೀಶ್..!  ಮಾಜಿ ಸಿಎಮ್ ಹೆಸರು ಹೇಳಿದ ಲಾಯರ್ ಜಗದೀಶ್

ಈ ಹಿಂದೆ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧದ ಲೈಂಗಿಕ ಹಗರಣ ಸಿಡಿ ವಿಷಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸಿದ್ದ ವಕೀಲ ಜಗದೀಶ್ ಕುಮಾರ್ ಅವರ ವಿರುದ್ಧ ಯಶವಂತಪುರ ಸೆನ್ ಪೊಲೀಸ್ ಠಾಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕರು ದೂರು ದಾಖಲಿಸಿದ್ದಾರೆ.

ವಕೀಲ ಜಗದೀಶ್ ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದು, ಯಶವಂತಪುರ ಸೆನ್ ಠಾಣೆಯ ಇನ್ಸ್ಪೆಕ್ಟರ್ ಸ್ವತಃ ಕರೆ ಮಾಡಿ ನಿಮ್ಮ ವಿರುದ್ಧ ದೂರು ಬಂದಿದೆ ಎಂದು ತಿಳಿಸಿದ್ದಾರೆ.

ಜಗದೀಶ್ ಅವರು ಸುಪ್ರೀಂಕೋರ್ಟಿನಲ್ಲಿ ದೂರು ದಾಖಲಿಸುವ ಮುನ್ನವೇ ಈ ಪ್ರಕರಣದ ಹಿಂದೆ ಇರುವವರು ಯಾರು ಎಂಬುದು ಕರ್ನಾಟಕದ ಜನತೆಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಈ ಮುನ್ನ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಕರಣದ ಕುರಿತು ಮಾಹಿತಿಯನ್ನು ಹೊರಗೆಡವಿದ್ದ ವಕೀಲ ಜಗದೀಶ್, ಕರ್ನಾಟಕದ ಮಾಜಿ ಮುಖ್ಯಮಂತ್ರಿಯೊಬ್ಬರು ತಮ್ಮ ಅಧಿಕಾರವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ರಾಜ್ಯದ ಮತ್ತು ಪರ ರಾಜ್ಯದ ಹಲವು ನಟಿಯರಿಗೆ ಐಷಾರಾಮಿ ಕಾರು, ಬಂಗಲೆ ನೀಡಿ ಲೈಂಗಿಕ ಸಹಕಾರ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.